- Advertisement -
- Advertisement -
ಉಡುಪಿ: ಬೆಲೆ ಏರಿಕೆ, ನಿರುದ್ಯೋಗ, ಕಮಿಷನ್ ವಿಚಾರದಲ್ಲಿ ಅವ್ಯವಹಾರ ವಿರೋಧಿಸಿ ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆದಿದೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಉಡುಪಿ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆದಿದೆ.
ಇದೇ ವೇಳೆ ದಕ್ಷಿಣ ಕನ್ನಡ ಮೂಲದ ಯುವತಿ ಸಹನಾ ಉಡುಪಿಯ ಶಿರ್ವದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಆತ್ಮಹತ್ಯೆ ಖಂಡಿಸಿ ಸರ್ಕಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಯುವತಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಯೂತ್ ಕಾಂಗ್ರೆಸ್ ನಿಂದ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
- Advertisement -