- Advertisement -
- Advertisement -
ಉಡುಪಿ: ತಡರಾತ್ರಿ ಸುರಿದ ಸಿಡಿಲು ಸಹಿತ ಭಾರೀ ಮಳೆಗೆ ಉಡುಪಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿದ್ದಾನೆ.
ಬ್ರಹ್ಮಾವರ ತಾಲೂಕಿನ ಮಂದಾರ್ತಿಯ ಆವರ್ಸೆ ಬಳಿ ದುರ್ಘಟನೆ ನಡೆದಿದ್ದು, ಪ್ರಮೋದ್ ಶೆಟ್ಟಿ (24) ಎಂಬ ಯುವಕ ಮೃತಪಟ್ಟಿದ್ದಾನೆ.
ಮೃತ ಯುವಕ ಮನೆಯಲ್ಲಿ ಇದ್ದ ವೇಳೆಯಲ್ಲಿ ಸಿಡಿಲು ಬಡಿದಿದ್ದು , ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
- Advertisement -