- Advertisement -
- Advertisement -
ಉಡುಪಿ: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕರಂಬಳ್ಳಿಯಲ್ಲಿ ನಡೆದಿದೆ. ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಮೃತ ವಿದ್ಯಾರ್ಥಿ.
ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ.
- Advertisement -