Thursday, June 26, 2025
Homeಕರಾವಳಿಮಂಗಳೂರುಪುತ್ತೂರು; ರೈಲಿನಿಂದ ಬಿದ್ದ ಯುವಕ 15 ಗಂಟೆಗಳ ಬಳಿಕ ಪತ್ತೆ

ಪುತ್ತೂರು; ರೈಲಿನಿಂದ ಬಿದ್ದ ಯುವಕ 15 ಗಂಟೆಗಳ ಬಳಿಕ ಪತ್ತೆ

spot_img
- Advertisement -
- Advertisement -

ಪುತ್ತೂರು; ರೈಲಿನಿಂದ ಬಿದ್ದ ಯುವಕ 15 ಗಂಟೆಗಳ ಬಳಿಕ ಪತ್ತೆಯಾಗಿರುವ ಘಟನೆ ಸವಣೂರಿನಲ್ಲಿ ನಡೆದಿದೆ.

ಮಾ. 25ರಂದು ರೈಲಿನಲ್ಲಿ ಕುಮಟಾದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ಇದು ತುಸು ನಿರ್ಜನ ಪ್ರದೇಶವಾಗಿದ್ದು ಇಳಿಜಾರಿನಿಂದ ಕೂಡಿದೆ. ಬಿದ್ದ ಸ್ಥಳದಿಂದ 25 ಅಡಿಗಳಷ್ಟು ಕೆಳಭಾಗಕ್ಕೆ ಜಾರಿಗೊಂಡು ಹೋಗಿದ್ದ ಯುವಕ ಅಲ್ಲಿ ಮೋರಿಯ ಪಕ್ಕ ಮಲಗಿದ ಸ್ಥಿತಿಯಲ್ಲೇ ಬಾಕಿಯಾಗಿದ್ದರು. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ಪತ್ತೆ ಕಾರ್ಯವೂ ಸಾಧ್ಯವಾಗಿರಲಿಲ್ಲ.

ಮಾ.26ರಂದು ಸುಣ್ಣಾಜೆ ಬಳಿ ಕೊಳವೆಬಾವಿಯ ಪಂಪ್ ಎಳೆಯಲು ಹೋಗಿದ್ದ ದಿನೇಶ್ ಆಚಾರ್ಯ, ಸಂತೋಷ್ ಅಲೆಕ್ಕಾಡಿ ಪ್ರತಾಪ್ ಪರಣೆ ಮತ್ತಿತರರಿಗೆ ಮೋರಿ ಸಮೀಪ ವ್ಯಕ್ತಿ ನರಳುವುದು ಕೇಳಿಸಿತು. ತಕ್ಷಣ ಈ ವಿಚಾರವನ್ನು ಸಾಮಾಜಿಕ ಕಾರ್ಯಕರ್ತ ಸಚಿನ್ ಸವಣೂರು ಅವರ ಗಮನಕ್ಕೆ ತಂದರು. ಅವರು ಆಗಮಿಸಿ ಯುವಕನನ್ನು ಪತ್ತೆಹಚ್ಚಿ ಆರೈಕೆ ಮಾಡಿ ವಿಚಾರಿಸಿದಾಗ, ಆತ ಕುಮಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಗ್ಗೆ ತಿಳಿಯಿತು.

ಬಳಿಕ ಪೊಲೀಸರ ಸೂಚನೆಯಂತೆ ಯುವಕನನ್ನು ಆಯಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಮುಖ ಹಾಗೂ ಕಾಲಿಗೆ ತೀವ್ರ ತರಹದ ಗಾಯಗಳಾಗಿವೆ.

- Advertisement -
spot_img

Latest News

error: Content is protected !!