- Advertisement -
- Advertisement -
ಶಿವಮೊಗ್ಗ: ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ನ ಕೊಲೆ ಮಾಡಲಾದ ಘಟನೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಮುಜಾಯಿದ್ದೀನ್(32) ಕೊಲೆಯಾದ ರೌಡಿ ಶೀಟರ್.
ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರಾತ್ರಿ ಸುಮಾರು 12.30ರ ಸಮಯದಲ್ಲಿ ಘಟನೆ ನಡೆದಿದೆ. ರಾತ್ರಿ ಪತ್ನಿ ಮನೆಯಿಂದ ಹೊರಗೆ ಬಂದಾಗ ಹತ್ಯೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -