- Advertisement -
- Advertisement -
ಮಂಗಳೂರು: ಈಜಲು ಹೋಗಿದ್ದ ಆರು ಮಂದಿ ಯುವಕರ ಪೈಕಿ ಇಬ್ಬರು ನಾಪತ್ತೆ; ಓರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ ಅಳಪೆ ಪಡ್ಪು ಬಳಿ ನಡೆದಿದೆ.
ಅಳಪೆ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನಾಪತ್ತೆಯಾದವರು . ಇದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ
ಅಳಪೆಯ ಪಡ್ಪು ಬಳಿ ಇರುವ ನೀರು ತುಂಬಿರುವ ಕೆರೆಯಂತಿರುವ ಹೊಂಡದಲ್ಲಿ ವರುಣ್, ವೀಕ್ಷಿತ್ ಸೇರಿದಂತೆ ಆರು ಮಂದಿ ಯುವಕರು ತೆರಳಿದ್ದರು. ಇವರೆಲ್ಲ ನೀರಿಗಿಳಿದಿದ್ದರು. ಈ ಪೈಕಿ ಇಬ್ಬರು ನಾಪತ್ತೆಯಾಗಿದ್ದರು. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
- Advertisement -