ಚಿತ್ರದುರ್ಗ : ಜೈಲಿನಲ್ಲಿ ನಟ ದರ್ಶನ್ ಗೆ ರಾಜಾಥಿತ್ಯ ನೀಡುತ್ತಿರುವ ಫೋಟೋ ವೈರಲ್ ಆದ ಬಗ್ಗೆ ಮೃತ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಪ್ರತಿಕ್ರಿಯಿಸಿದ್ದಾರೆ,. ಈ ಬಗ್ಗೆ ಮಾತನಾಡಿದ ಅವರು ಪೊಲೀಸರ ಮೇಲೆ & ಸರ್ಕಾರದ ಮೇಲೆ ನಂಬಿಕೆ ಇದೆ.ಇದನ್ನ ನೋಡಿ ನಮಗೆ ಶಾಕ್ ಆಯ್ತು ಎಂದು ಕಣ್ಣೀರಿಟ್ಟಿದ್ದಾರೆ.
ಇದು ಸಮಗ್ರವಾಗಿ ಇದು ಕೂಡಾ ತನಿಖೆ ಆಗಲಿ.ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ಮಾಡಲಿ.ಯಾರಾದ್ರೂ ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು.ಮಾಧ್ಯಮಗಳು ಎಲ್ಲವನ್ನು ಬಯಲಿಗೆಳೆಯುತ್ತವೆ : ನಟ ದರ್ಶನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಒಂದೇ ವಿಚಾರಗಳನ್ನು ಬೈಲಿಗೆಳೆಯುತ್ತಿವೆ. ಈ ಮೂಲಕ ಎಲ್ಲರಿಗೂ, ಸರ್ಕಾರಕ್ಕೂ ಎಚ್ಚರಿಕೆ ಕೊಡ್ತದ್ದಿರಾ, ತಮಗೂ ಕೂಡಾ ತುಂಭಾ ಧನ್ಯವಾದ, ಸರ್ಕಾರ ಕೂಡ ಗಮನ ಹರಿಸಬೇಕು ಎಂದರು. ನ್ಯಾಯಾಂಗ ಇದೆ, ಚಾರ್ಜ್ ಶೀಟ್ ಹಾಕಿದ ಬಳಿಕ ಗೊತ್ತಾಗುತ್ತದೆ. ಜಡ್ಜ್ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಪೂರ್ಣ ನಂಬಿಕೆ ಇದೆ ಎಂದು ಶಿವನಗೌಡ ತಿಳಿಸಿದ್ದಾರೆ,